ಮೂಲಗಳ ಪ್ರಕಾರ, ಪ್ರಶ್ನೆ ಪತ್ರಿಕೆಗಳು ನಿಗಧಿತ ಪರೀಕ್ಷಾ ಕೇಂದ್ರಕ್ಕೆ ಮಾತ್ರ ತಲುಪಿಸಬೇಕು. ಆದರೆ ತಲುಪಿಸುವ ಆತುರತೆಯಿಂದ ಅಧಿಕಾರಿಗಳು ಒಂದು ಕೇಂದ್ರದ ಪ್ರಶ್ನೆಪತ್ರಿಕೆಗಳ ಬಂಡಲ್ನ್ನು ಮತ್ತೊಂದು ಕೇಂದ್ರಕ್ಕೆ ತಲುಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವನ್ನು ಮತ್ತೆ ನಿಗಧಿತ ಕೇಂದ್ರಕ್ಕೆ ತಲುಪಿಸಬೇಕಾಗಿದೆ. ಆ ಬಳಿಕವಷ್ಟೇ ಪರೀಕ್ಷೆ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ಈಗಾಗಲೇ ನಿಗಧಿತ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಾಗುತ್ತಿದೆ.
ಇನ್ನು ಪ್ರಕರಣ ಬೆಳಕಿಗೆ ಬಂದ ಕೂಡಲೇ ಹಿರಿಯ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಆದರೆ ಈ ಘಟನೆಯಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು. ಎರಡು ಗಂಟೆ ತಡವಾಗಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ.