ವಾರ್ಡನ್ಗಳ ಸಭೆ ಕರೆದಿದ್ದ ಅವರು, ಏಕಾಏಕಿ ಕನಸುಕಟ್ಟಿಕೊಂಡು ಬರುವ ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ನೀವು ಇಲ್ಲಿ ನರಕ ದರ್ಶನ ಮಾಡಿಸುತ್ತಿದ್ದೀರಾ ಎಂದು ವಾರ್ಡನ್ಗಳಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳಿದ ಸಚಿವರು, ಸರ್ಕಾರ ಕೋಟಿಗಟ್ಟಲೆ ಅನುಧಾನವನ್ನು ಇಲಾಖೆಗೆ ನೀಡುತ್ತಿದ್ದರೂ ಕೂಡ ವಿದ್ಯಾರ್ಥಿಗಳಿಗೆ ತಂಗಳನ್ನ ಹಾಕುತ್ತಿದ್ದೀರಂತೆ, ನಿಮ್ಮ ಹೆಂಡತಿ ಮಕ್ಕಳನ್ನೂ ಕೂಡ ಹಾಗೆಯೇ ನೋಡಿಕೊಳ್ಳುತ್ತೀರಾ, ಸ್ವಲ್ಪವಾದರೂ ಮನುಷ್ಯತ್ವ ಇಟ್ಟುಕೊಳ್ಳಿ, ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳಿ. ಇನ್ನು ಮುಂದೆ ಇಂತಹ ಯಾವುದೇ ಸಮಸ್ಯೆ ಉದ್ಬವಿಸದಂತೆ ನೋಡಿಕೊಳ್ಳಿ ಎಂದು ತಿಳಿ ಹೇಳಿದರು.
ಇದೇ ವೇಳೆ ಚೀನಾ ಪ್ರವಾಸವನ್ನು ನೆನಪಿಸಿಕೊಂಡ ಅವರು, ಚೀನಾದಲ್ಲಿ ಏನಾದರೂ ಹೀಗಾದಲ್ಲಿ ಗುಂಡಿಕ್ಕಿ ಕೊಲ್ಲಲಾಗುತ್ತದೆ ಎಂದರು. ಬಳಿಕ, ಸರ್ಕಾರದ ನೀತಿ ನಿಯಮವನ್ನು ಉಲ್ಲಂಘಿಸಿ ಕಾರ್ಯ ನಿರ್ವಹಿಸಿದಲ್ಲಿ ಅಂತಹ ವಾರ್ಡನ್ ಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.