ಇಂದು ರಾಜ್ಯ ಬಿಜೆಪಿಯ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ

ಶನಿವಾರ, 24 ಜೂನ್ 2023 (15:49 IST)
ಇಂದು ರಾಜ್ಯ ಬಿಜೆಪಿಯ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಸಂಜೆ 5 ಗಂಟೆಗೆ ಅರಮನೆ ಮೈದಾನದಲ್ಲಿ ನಡೆಯಲಿದೆ.ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು,ಲೋಕಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಗೆ ಸಿದ್ದತೆ ಹಿನ್ನೆಲೆ ಕಾರ್ಯಕರ್ತರು ಮುಖಂಡರ  ಜೊತೆ ಸಮಾಲೋಚನೆ ನಡೆಯಲಿದೆ.ಪ್ರಧಾ‌ನಿ‌ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ 9 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆ ಕೇಂದ್ರ ಸರ್ಕಾರದ ಯೋಜನೆ ಸಾಧನೆಗಳನ್ನ ಮನೆಮನೆಗೆ ತಲುಪಿಸುವುದು.ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಲಾಗುತ್ತೆ.ಲೋಕಸಭಾ ಚುನಾವಣೆ ಸೇರಿದಂತೆ ಚುನಾವಣೆಗೂ ಪ್ಲಾನ್ ನಡೆಸಲಾಗುತ್ತೆ,ಸಭೆಯಲ್ಲಿ ಬೆಂಗಳೂರಿನ ಶಾಸಕರು,ಸಂಸದರು ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ