ರಾಜ್ಯ ಉಪಚುನಾವಣೆ ಹಿನ್ನಲೆ; ನಾಳೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

ಶುಕ್ರವಾರ, 2 ನವೆಂಬರ್ 2018 (14:15 IST)
ಬೆಂಗಳೂರು : ನವೆಂಬರ್ 3ರಂದು ರಾಜ್ಯದ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ರಜೆ ಘೋಷಿಸಲಾಗಿದೆ.


ನಾಳೆ ರಾಜ್ಯದ ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಚುನಾವಣೆಯನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.


ಹಾಗಾಗಿ ಜನರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತ್ತು ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜು, ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್ ಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕೆಂದು ಉದ್ಯಮಗಳ ಮಾಲೀಕರಿಗೆ ಸೂಚನೆ ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ