ಉತ್ತರ ಭಾರತದ ಗಂಗಾ ಆರತಿ ಮಾದರಿಯಲ್ಲೇ ಕರ್ನಾಟಕದ ಜೀವನದಿ ಕಾವೇರಿಗೆ ಆರತಿ ಸಲ್ಲಿಸುವ ಅದ್ಧೂರಿ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಮೊದಲ ಬಾರಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಈ ಆರತಿ ಕಾರ್ಯಕ್ರಮವನ್ನು ಖುದ್ದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ನೆರವೇರಿಸಿದ್ದರು. ಇದೀಗ ಮಂಡ್ಯ ಜಿಲ್ಲೆಯ ಕೆಆರ್ಎಸ್ ಉದ್ಯಾನವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಬಗ್ಗೆ ಅಪ್ಡೇಟ್ ಅನ್ನು ನೀಡಿದ್ದಾರೆ.
ಇಂದು ಈ ಕಾರ್ಯಕ್ರಮ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಿದ್ದು, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಮಳೆಗಾಲದ ಆರಂಭದಲ್ಲೇ ಉತ್ತಮ ಮಳೆಯಾಗಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇನ್ನು ಕಾವೇರಿ ಕೂಡ ಉಕ್ಕಿ ಹರಿಯುತ್ತಿದ್ದಾಳೆ. ಉತ್ತಮ ಮಳೆ ಹಿನ್ನೆಲೆ ಇದೇ ಹೊತ್ತಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದೆ.