ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರಕಾರ ಕಂಬಳದ ಪರವಾಗಿ ಹೈಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಕಂಬಳದ ಸಂಘಟಕರಿಗೆ ರಾಜೋತ್ಸವ ಪ್ರಶಸ್ತಿಯನ್ನು ನೀಡಿದೆ. ಕಂಬಳ ಕ್ರೀಡೆಗೆ ಅನುದಾನದ ಜೊತೆಗೆ ಕಂಬಳ ಓಡಿಸುವವರಿಗೆ ಪಿಂಚಣಿಯನ್ನು ನೀಡುವ ಮೂಲಕ ರಾಜ್ಯ ಸರಕಾರಿ ಕಂಬಳಕ್ಕೆ ಪ್ರೋತ್ಸಾಹ ನೀಡಿದೆ ಎಂದು ವಿವರಿಸಿದರು.