ಮಾಜಿ ಶಾಸಕನ ಕಾರಿನ ಮೇಲೆ ಉದ್ರಿಕ್ತ ಗುಂಪಿನಿಂದ ಕಲ್ಲು ತೂರಾಟ

ಗುರುವಾರ, 18 ಫೆಬ್ರವರಿ 2016 (20:27 IST)
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬರಗುಡಿ ಗ್ರಾಮದಲ್ಲಿ ಮಾಜಿ ಶಾಸಕ ಡಾ.ಸಾರ್ವಭೌಮ ಬಗಲಿ ಕಾರಿನ ಮೇಲೆ ಯುವಕರ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ.ಮಾಜಿ ಶಾಸಕ ಬಗಲಿ ಇಂಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
 
ಇಂಡಿ ಕ್ಷೇತ್ರದ ಹಾಲಿ ಶಾಸಕ ಯಶವಂತರಾಯ್ ಗೌಡ, ಬಸವಂತರಾಯಗೌಡ ಮತ್ತು ಅವರ ಸಹಚರರ ವಿರುದ್ಧ ದೂರು ನೀಡಿದ್ದಾರೆ. 
 
ಕಾರಿನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಹಾಲಿ ಶಾಸಕರ ಕುಮ್ಮಕ್ಕಿನಿಂದ ನನ್ನ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಇಂಡಿ ಕ್ಷೇತ್ರದ ಮಾಜಿ ಶಾಸಕ ಡಾ.ಸಾರ್ವಭೌಮ ಬಗಲಿ ಆರೋಪಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ