ಕಲ್ಲು ತೂರಾಟ ಘಟನೆ: ಖಡಕ್ ಎಚ್ಚರಿಕೆ ನೀಡ್ದೋರಾರು?

ಭಾನುವಾರ, 14 ಏಪ್ರಿಲ್ 2019 (16:48 IST)
ಬಂದರು ನಗರಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣವನ್ನ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದು, ಮಂಗಳೂರು ಹೊರವಲಯದ ಕುತ್ತಾರು ಬಳಿ ಬಸ್ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಶೀಘ್ರವೇ ಉಳಿದ ಆರೋಪಿಗಳನ್ನು ಬಂಧಿಸಲಾಗುವುದು  ಅಂತ ಹೇಳಿದ್ದಾರೆ.

ಘಟನೆ ನಡೆದ ಪ್ರದೇಶದಲ್ಲಿ ಶಾಂತ ಪರಿಸ್ಥಿತಿ ಮುಂದುವರಿದಿದೆ. ಕಾನೂನು ಕೈಗೆತ್ತಿಕೊಳ್ಳುವವರ  ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು  ಖಡಕ್ ಎಚ್ಚರಿಕೆ ನೀಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ