ಆಕಸ್ಮಿಕ ಬೆಂಕಿಗೆ ಅಂಗಡಿ ಭಸ್ಮ

ಸೋಮವಾರ, 15 ಅಕ್ಟೋಬರ್ 2018 (16:20 IST)
ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಅಂಗಡಿಯೊಂದು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಫುಟ ವೇರ್ ಅಂಗಡಿಯಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಬೆಂಕಿಗಾಹುತಿಯಾಗಿದೆ.

ರಾಮಚಂದ್ರ ಮಾದರ ಎಂಬುವರಿಗೆ ಸೇರಿದ ಪುಟ್ ವೇರ ಅಂಗಡಿ ಸುಟ್ಟು ಕರಕಲಾಗಿದೆ. ಸುಮಾರು 2 ಲಕ್ಷ ಮೌಲ್ಯದ ಪುಟ್ ವೇರ ಭಸ್ಮವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಈ ಕುರಿತು ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ