ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಗುರುವಾರ, 25 ಜನವರಿ 2018 (07:23 IST)
ದಾವಣಗೆರೆ: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿವೆ. ಈ ಹಿನ್ನೆಲೆ ದಾವಣಗೆರೆಯ ಜಯದೇವ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಧರಣಿ ನಡೆಸುತ್ತಿದ್ದಾರೆ.


ಕರುನಾಡ ಸಮರ ಸೇನೆ, ರೈತ ಸಂಘದವರು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ