ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಯಶಸ್ವಿನಿ(17) ಎನ್ನಲಾಗಿದ್ದು, ನಗರದ ಕೆ.ಆರ್.ಪುರಂ ನಿವಾಸಿಯಾಗಿದ್ದಾಳೆ. ಈಕೆ ನಗರದ ಜಿಟಿಟಿಸಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿನಿಯಾಗಿದ್ದು, ಅಭ್ಯಸುಸುತ್ತಿದ್ದಳು ಎನ್ನಲಾಗಿದೆ.
ಘಟನೆ ವಿವರ: ಉಪಾನ್ಯಾಸಕರು ಪರೀಕ್ಷೆಗೆ ಅಗತ್ಯವಾದ ಕೆಲ ಸಾಮಗ್ರಿಗಳನ್ನು ನೀಡಿದ್ದರು ಎನ್ನಲಾಗಿದ್ದು, ಅದನ್ನು ವಿದ್ಯಾರ್ಥಿನಿ ಹಿಂದಿರುಗಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಪಿತಗೊಂಡ ಉಪನ್ಯಾಸಕರು, ವಿದ್ಯಾರ್ಥಿನಿಯನ್ನು ಮನ ಬಂದಂತೆ ನಿಂದಿಸಿದ್ದಾರೆ. ಈ ಬಗ್ಗೆ ಮೃತ ವಿದ್ಯಾರ್ಥಿನಿಯು ತನ್ನ ಸಹಪಾಠಿಗಳೊಂದಿಗೆ ಹೇಳಿಕೊಂಡಿದ್ದು, ಬೇಸರವಾಗಿರುವುದಾಗಿ ವಿವರಿಸಿದ್ದಾಳೆ ಎಂದು ತಿಳಿದು ಬಂದಿದೆ.