ನಗರದ ಪ್ರಗತಿ ಕಾಲೇಜಿನ ಅಟೆಂಡರ್ ಮಹೇಶ್.ಕೆ ಎಂಬಾತ ಇಲ್ಲಿನ ವಸತಿ ಶಾಲೆಯಲ್ಲಿಯೇ ತಂಗಿದ್ದ ಪಾವಗಡ ಮೂಲದ ಪಿಯುಸಿ ವಿದ್ಯಾರ್ಥಿನಿ ಗೌತಮಿ(18) ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದ. ಅಲ್ಲದೆ ಮೃತ ವಿದ್ಯಾರ್ಥಿನಿಯ ಸ್ನೇಹಿತೆ ಶಿರಿಶಾ(18) ಮೇಲೂ ಗುಂಡು ಹಾರಿಸಿ ಗಾಯಗೊಳಿಸಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಘಟನೆಯು ಮಾರ್ಚ್ 31ರ ರಾತ್ರಿ ನಡೆದಿತ್ತು.