ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲಿಸಲೇಬೇಕು- ಬಿಸಿ ನಾಗೇಶ್

ಶನಿವಾರ, 26 ಮಾರ್ಚ್ 2022 (20:51 IST)
ಸೋಮವಾರದಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಸಚಿವ ಬಿಸಿ ನಾಗೇಶ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ.
 
ಕೊರೋನಾ ನಂತರ ಮೊದಲ ಸಲ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆಯಲು ರೆಡಿಯಾಗಿದ್ದು, ಅವರ ಮಾನಸಿಕ ಸ್ಥಿತಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಎಸ್‌ಎಸ್‌ಎಲ್ಸಿ ಪರೀಕ್ಷೆ ಸಂದರ್ಭದಲ್ಲಿಯೂ ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಸಚಿವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ