ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ

ಮಂಗಳವಾರ, 20 ಡಿಸೆಂಬರ್ 2022 (13:28 IST)
ಬೆಳಗಾವಿ : ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಬಿಜೆಪಿ ಸದಸ್ಯ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರ ನೇತೃತ್ವದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು ನಾಳೆ ಚುನಾವಣೆ ನಡೆಯಲಿದೆ.

ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಹೊರಟ್ಟಿ ಈ ಬಾರಿ ಚುನಾವಣೆಯಲ್ಲಿ ಗೆದ್ದಿದ್ದರು. ಬಿಜೆಪಿ ಸೇರಲು ಸಭಾಪತಿ ನೀಡುವ ಭರವಸೆಯನ್ನ ಬಿಜೆಪಿ ನಾಯಕರು ಕೊಟ್ಟಿದ್ದರು.

ಕೊಟ್ಟ ಮಾತಿನಂತೆ ಸಭಾಪತಿ ಸ್ಥಾನ ನೀಡಿ ಬಿಜೆಪಿ ಮಾತು ಉಳಿಸಿಕೊಂಡಿದೆ. ಬಹುಮತ ಇರುವ ಕಾರಣ ನಾಳೆ ನಡೆಯುವ ಚುನಾವಣೆಯಲ್ಲಿ ಹೊರಟ್ಟಿ ಅವರು ಅವಿರೋಧ ಆಯ್ಕೆ ಆಗಲಿದ್ದಾರೆ. 

ಪಕ್ಷ, ಪಕ್ಷದ ನಾಯಕರು ಪ್ರೀತಿ ವಿಶ್ವಾಸ ಇಟ್ಟು ಸ್ಥಾನ ಕೊಟ್ಟಿದ್ದಾರೆ. ನನಗೆ ಕೊಟ್ಟ ಜವಾಬ್ದಾರಿ, ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ