ವಿದ್ಯುತ್​ ತಗುಲಿ ಕಬ್ಬಿನ ಬೆಳೆ ಭಸ್ಮ

ಭಾನುವಾರ, 5 ಮಾರ್ಚ್ 2023 (13:42 IST)
ವಿದ್ಯುತ್ ತಂತಿ ತಗುಲಿ 7ಎಕರೆ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ. ರೈತ ನಾಗೇಶ್ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದೆ. 7 ಎಕರೆ ಪ್ರದೇಶದಲ್ಲಿ ಬೆಳೆದಿದ್ದ 200 ಟನ್ ಕಬ್ಬು ಭಸ್ಮವಾಗಿದೆ.. ಅಂದಾಜು 9 ಲಕ್ಷ ರೂ ಬೆಲೆಬಾಳುವ ಕಬ್ಬು ಬೆಂಕಿಗಾಹುತಿಯಾಗಿದ್ದು, ರೈತ ನಾಗೇಶ್​ ಕಂಗಾಲಾಗಿದ್ದಾನೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ