Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ
ಕರಾವಳಿ ನಗರಿ ಮಂಗಳೂರಿನಲ್ಲಿ ಹಿಂದೂ ಮತ್ತು ಮುಸ್ಲಿಮರ ಕೊಲೆಯಾಗುತ್ತಿದೆ. ಒಂದು ಕೊಲೆಗೆ ಪ್ರತೀಕಾರವಾಗಿ ಮತ್ತೊಂದು ಕೊಲೆ ಎಂಬ ಪರಿಸ್ಥಿತಿಯಾಗಿದೆ. ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಇತ್ತೀಚೆಗೆ ಅಬ್ದುಲ್ ರಹಿಮಾನ್ ಕೊಲೆಯಾಗಿತ್ತು. ಇದರ ಬೆನ್ನಲ್ಲೇ ಈಗ ಸುಹಾಸ್ ಶೆಟ್ಟಿ ಪ್ರಕರಣವನ್ನು ಎನ್ಐಎಗೆ ವಹಿಸಲಾಗಿದೆ.
ಮೇ 1 ರಂದು ರಾತ್ರಿ ಬಜ್ಪೆಯಲ್ಲಿ ಬಜರಂಗ ದಳದ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಅನ್ಯಕೋಮಿನ ಯುವಕರು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿಯಾಗಿತ್ತು.
ಈ ಪ್ರಕರಣವನ್ನು ಈಗ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಲಿದೆ. ಸುಹಾಸ್ ಶೆಟ್ಟಿ ಕೊಲೆಗೆ ಈ ಹಿಂದೆ ನಡೆದ ಕೊಲೆಗಳಿಗೂ ಲಿಂಕ್ ಇದೆ. ಹೀಗಾಗಿ ಹಿಂದಿನ ಹಲವು ಪ್ರಕರಣಗಳೂ ಈ ತನಿಖೆಯೊಂದಿಗೆ ಬಯಲಾಗುವ ಸಾಧ್ಯತೆಯಿದೆ.