ಮತದಾರರಿಗೆ ಥ್ಯಾಂಕ್ಸ್ ಹೇಳಲು ಸುಮಲತಾ ಅಂಬರೀಶ್ ಪ್ಲ್ಯಾನ್

ಬುಧವಾರ, 29 ಮೇ 2019 (05:42 IST)
ಮಂಡ್ಯ: ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿಯಾಗಿ ಗೆಲ್ಲಿಸಿದ ಮಂಡ್ಯ ಜನತೆಗೆ ಧನ್ಯವಾದ ಸಲ್ಲಿಸಲು ಸುಮಲತಾ ಅಂಬರೀಶ್ ಭರ್ಜರಿ ಸಿದ್ಧತೆ ನಡೆಸಿದ್ದಾರೆ.


ಫಲಿತಾಂಶ ಬಂದ ಬಳಿಕ ಮಾತುಕೊಟ್ಟಂತೆ ಮಂಡ್ಯದಲ್ಲಿ ವಿಜಯೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಮೇ 29 ರಂದು ರೆಬಲ್ ಸ್ಟಾರ್ ಅಂಬರೀಶ್‍ ಜನ್ಮದಿನದಂದೇ ಈ ಮೊದಲು ವಿಜಯೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿತ್ತು.

ಅದರಂತೆ ಇಂದು ಅಂಬಿ ಜಯಂತ್ಯೋತ್ಸವ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್, ದರ್ಶನ್ ಮುಂತಾದವರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ