ಸೀಲ್ ಡೌನ್ ಏರಿಯಾದಲ್ಲಿ ಸುಮಲತಾ ಅಂಬರೀಶ್

ಭಾನುವಾರ, 10 ಮೇ 2020 (22:48 IST)
ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾದ ಬಳಿಕ ಸೀಲ್ ಡೌನ್ ಮಾಡಲಾದ ಪ್ರದೇಶದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕಾಣಿಸಿಕೊಂಡಿದ್ದಾರೆ.  

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಎರಡು ಕರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿ ಸೀಲ್ ಡೌನ್ ಆಗಿರುವ ಜಾಗಿನಕೆರೆ ಗ್ರಾಮಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಆತ್ಮವಿಶ್ವಾಸದಿಂದ ಕೊರೊನಾ ಎದುರಿಸಿ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕಿ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡೋಣ ಎಂದು ವಿಶ್ವಾಸ ತುಂಬಿದರು.

ಕೊರೋನಾ ಮಹಾಮಾರಿಯ ಬಗ್ಗೆ ಹೆದರಬೇಕಾಗಿಲ್ಲ. ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ಮುಖಕ್ಕೆ ಮಾಸ್ಕ್ ಅಳವಡಿಸಿಕೊಂಡು ಕೈಗಳನ್ನು ಸ್ಯಾನಿಟೈಸರ್ ಇಲ್ಲವೇ ಸೋಪಿನಿಂದ ತೊಳೆದುಕೊಂಡು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು  ಮನವಿ ಮಾಡಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ