ವಿಕಾಸಸೌಧದಲ್ಲಿ ನಡೆದ ಪತ್ರಕರ್ತರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು 1983 ರಿಂದ ರಾಜಕೀಯದಲ್ಲಿದ್ದೇನೆ. ಐವರು ಮುಖ್ಯಮಂತ್ರಿಗಳ ಜೊತೆ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಇಬ್ಬರು ಮುಖ್ಯಮಂತ್ರಿಗಳ ಜೊತೆ ಡಿಸಿಎಂನಾಗಿ ಸೇವೆ ಸಲ್ಲಿಸಿದ್ದೇನೆ. ಆದರೆ, ಈ ರೀತಿಯ ಹೊಸ ಕಾರ್ಯಕ್ರಮವನ್ನು ಮೊದಲ ಬಾರಿಗೆ ನೋಡುತ್ತಿದ್ದೇನೆ ಎಂದು ಹೇಳಿದರು.
ಅನ್ನ ಭಾಗ್ಯ ಯೋಜನೆ ಕುರಿತು ಹಲವರು ಟೀಕೆ ಮಾಡಿದ್ದರು. ಆದರೆ, ಈ ಯೋಜನೆ ನನಗೆ ಸಂಪೂರ್ಣ ತೃಪ್ತಿ ತಂದಿದೆ. ಬರ ಪರಿಸ್ಥಿತಿಯಲ್ಲಿ ಜನರು ಊರು ಬಿಟ್ಟು ಹೋಗುವ ಪರಿಸ್ಥಿತಿ ಎದುರಾಗಿತ್ತು. ಈ ಸಮಯದಲ್ಲಿ ಅನ್ನ ಭಾಗ್ಯ ಯೋಜನೆ ಎಲ್ಲರಿಗೂ ಸಹಾಯಕವಾಯಿತು ಎಂದು ಹೇಳಿದರು.