ಬಳ್ಳಾರಿಗೆ ಭೇಟಿ ನೀಡಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ

ಶುಕ್ರವಾರ, 22 ಸೆಪ್ಟಂಬರ್ 2017 (13:41 IST)
ಗಣಿನಾಡು ಬಳ್ಳಾರಿಗೆ ಭೇಟಿ ನೀಡಲು ಅಕ್ರಮ ಗಣಿಗಾರಿಕೆ ಹಗರಣದಲ್ಲಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸೆಪ್ಟೆಂಬರ್ 29, 30 ಮತ್ತು ಆಕ್ಟೋಬರ್ 1 ರ ವರೆಗೆ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
 
ಸ್ವಂತ ಕ್ಷೇತ್ರವಾದ ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಜನಾರ್ದನ ರೆಡ್ಡಿ ಪರ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ರೆಡ್ಡಿ ಪರ ವಕೀಲರ ಅರ್ಜಿಗೆ ಸ್ಪಂದಿಸಿದ ಕೋರ್ಟ್ ಬಳ್ಳಾರಿಗೆ ತೆರಳಲು ಅವಕಾಶ ನೀಡಿದೆ ಎಂದು ಮೂಲಗಳು ತಿಳಿಸಿವೆ.
 
ಗಣಿಹಗರಣದ ರೂವಾರಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಜಾಮೀನು ನೀಡುವ ಮುನ್ನ, ಯಾವುದೇ ಕಾರಣಕ್ಕೂ ಕೋರ್ಟ್ ಅನುಮತಿ ಪಡೆಯದೇ ಬಳ್ಳಾರಿ ಭೇಟಿ ನೀಡತಕ್ಕದ್ದು ಎನ್ನುವ ಷರತ್ತು ವಿಧಿಸಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ