ತೀರ್ಪು ಏನೇ ಬಂದ್ರೂ ನೀರು ಬಿಡಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ನುಡಿ

ಮಂಗಳವಾರ, 27 ಸೆಪ್ಟಂಬರ್ 2016 (14:27 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಿಂದ ಏನೇ ತೀರ್ಪು ಬಂದರೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ.
 
ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ ವಹತ್ವದ ಹೇಳಿಕೆ ನೀಡಿರುವ ಅವರು, ರಾಜ್ಯದ ರೈತರ ಹಿತ ಕಾಪಾಡಿಕೊಳ್ಳಲು ರಾಜ್ಯ ಸರಕಾರ ಮುಂದಾಗಿದೆ. ಕಾವೇರಿ ವಿವಾದ ಕುರಿತಂತೆ ರಾಜ್ಯ ಸರಕಾರ ಕೈಗೊಂಡಿರುವ ನಿರ್ಧಾರವನ್ನು ಎಲ್ಲರೂ ಸಮರ್ಥಿಸಿಕೊಳ್ಳಬೇಕು ಎಂದು ಹಿರಿಯ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ.  
 
ಕಾವೇರಿ ನದಿ ನೀರು ವಿವಾದದ ಬಗ್ಗೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ದೀಪಕ್ ಮಿಶ್ರಾ ಉದಯ್ ಲಲಿತ್ ಪೀಠ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. 
 
ಸುಪ್ರೀಂ ತೀರ್ಪನ್ನು ಆಧರಿಸಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಭದ್ರತೆಗಾಗಿ 14 ಅರೆಸೇನಾ ತುಕಡಿ, 40 ಕೆಎಸ್‌ಆರ್‌ಪಿ, ಸಿಎಆರ್ ತುಕಡಿಯನ್ನು ನೇಮಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ