ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ ವಹತ್ವದ ಹೇಳಿಕೆ ನೀಡಿರುವ ಅವರು, ರಾಜ್ಯದ ರೈತರ ಹಿತ ಕಾಪಾಡಿಕೊಳ್ಳಲು ರಾಜ್ಯ ಸರಕಾರ ಮುಂದಾಗಿದೆ. ಕಾವೇರಿ ವಿವಾದ ಕುರಿತಂತೆ ರಾಜ್ಯ ಸರಕಾರ ಕೈಗೊಂಡಿರುವ ನಿರ್ಧಾರವನ್ನು ಎಲ್ಲರೂ ಸಮರ್ಥಿಸಿಕೊಳ್ಳಬೇಕು ಎಂದು ಹಿರಿಯ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸುಪ್ರೀಂ ತೀರ್ಪನ್ನು ಆಧರಿಸಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಭದ್ರತೆಗಾಗಿ 14 ಅರೆಸೇನಾ ತುಕಡಿ, 40 ಕೆಎಸ್ಆರ್ಪಿ, ಸಿಎಆರ್ ತುಕಡಿಯನ್ನು ನೇಮಿಸಲಾಗಿದೆ.