ಕಾವೇರಿ ಸುಪ್ರೀಂ ತೀರ್ಪು: ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿ ಮುಖಂಡರ ತುರ್ತು ಸಭೆ

ಮಂಗಳವಾರ, 20 ಸೆಪ್ಟಂಬರ್ 2016 (17:22 IST)
ಕಾವೇರಿ ನದಿ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆದಿದೆ.
 
ಕೇಂದ್ರ ಸರಕಾರ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ರಾಜ್ಯದ 17 ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೋ ಅಥವಾ ಇಲ್ಲವೋ ಕಾದು ನೋಡಬೇಕಾಗಿದೆ. 
 
ಕೇಂದ್ರ ಸರಕಾರ 4 ವಾರಗಳಲ್ಲಿ ಕಾವೇರಿ ನಿರ್ವಹಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಕಾವೇರಿ ವಿವಾದ ಇದೀಗ ಕೇಂದ್ರದ ಅಂಗಳ ತಲುಪಿದೆ. ಇದೀಗಲಾದರೂ ಬಿಜೆಪಿ ನಾಯಕರು ಎಚ್ಚೆತ್ತುಕೊಳ್ಳುತ್ತಾರೆಯೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
 
ಬಿಜೆಪಿ ಮುಖಂಡರು ಕೇವಲ ಸಿಎಂ ಸಿದ್ದರಾಮಯ್ಯ ಸರಕಾರವನ್ನು ಟೀಕಿಸುತ್ತಾ ಕಾಲ ಕಳೆಯದೇ ತಮ್ಮ ಪಕ್ಷದ ಪ್ರಧಾನಿಯ ಮೇಲೆ ಒತ್ತಡ ಹೇರಲು ಸಿದ್ದರಾಗುತ್ತಾರೋ ಇಲ್ಲವೋ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ