ರಾಯಣ್ಣ ಬ್ರಿಗೇಡ್ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ಕಿತ್ತಾಟ ತಾರಕಕ್ಕೇರಿದ್ದು, ಪಕ್ಷದ ಈ ಬೆಳವಣಿಗೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಾಳಯದಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಕಾರ್ಯಕರ್ತರಿಗೆ ಬೇಸರ ತಂದಿದೆ. ಯಾವುದೇ ಗೊಂದಲಗಳಿದ್ದರು ಪಕ್ಷದ ವೇದಿಕೆಯಲ್ಲೇ ಚರ್ಚೆಯಾಗಬೇಕು. ಕೆಲವರು ಬಹಿರಂಗವಾಗಿ ಪತ್ರ ಬರೆಯುತ್ತಿರುವುದು ಸರಿಯಲ್ಲ ಎಂದರು.