ಬಿಜೆಪಿ ವಿರುದ್ದ ಆರೋಪ ಮಾಡಿದ ಸುರ್ಜೆ ವಾಲ

ಗುರುವಾರ, 4 ಮೇ 2023 (17:18 IST)
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾವು ಬಯಸಿದ್ದಾರೆ ಬಿಜೆಪಿ ಶಾಸಕ ಈ ಹಿನ್ನೆಲೆ ಪ್ರಧಾನಿ   ಮೋದಿ ಅವರು ಕ್ಷಮೇ ಕೇಳಬೇಕು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆ ವಾಲಾ ಆಗ್ರಹಿಸಿದರು.ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ರಾಜಸ್ಥಾನದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಮದನ್ ದಿಲಾವರ್ ಹೇಳಿಕೆ ಪ್ರಕಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ 80 ವರ್ಷವಾಗಿದ್ದು, ದೇವರು ಆತನನ್ನು ಯಾವಾಗಬೇಕಾದರೂ ಕರೆಸಿಕೊಳ್ಳಬಹುದು’ ಎಂದಿದ್ದಾರೆ. ಆಮೂಲಕ ದಲಿತ ಸಮುದಾಯದ ನಾಯಕನ ವಿರುದ್ಧ ಬಿಜೆಪಿಯ ದ್ವೇಷ ಮನೋಭಾವ ಎದ್ದು ಕಾಣುತ್ತಿದೆ. ಬಿಜೆಪಿ ನಾಯಕರು ಖರ್ಗೆ ಅವರ ಸಾವು ಬಯಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ