ನಡೆದಾಡುವ ದೇವರು ಅಗಲಿಕೆ: ಕಂಬನಿ ಮಿಡಿದ ಶಾಸಕ

ಸೋಮವಾರ, 21 ಜನವರಿ 2019 (19:45 IST)
ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀ ಲಿಂಗೈಕ್ಯ ಹಿನ್ನೆಲೆ ಶಾಸಕರು ಕಂಬನಿ ಮಿಡಿದಿದ್ದಾರೆ.

ಹಾವೇರಿಯಲ್ಲಿ ಶಾಸಕ ಸಿ.ಎಂ.ಉದಾಸಿ ಅವರು ತುಮಕೂರು ಸಿದ್ದಗಂಗಾ ಮಠದ ಪೀಠಾಧೀಶ ಶಿವಕುಮಾರ ಸ್ವಾಮೀಜಿಗಳ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ದೇಶದ ಒಬ್ಬ ಮಹಾನ್ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಶ್ರೀಗಳ ಅಗಲಿಕೆಯಿಂದ ನಮ್ಮ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದು ಶಾಸಕರು ಹೇಳಿದ್ದಾರೆ.

ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ, ಅನ್ನದಾನ ಮಾಡಿದ್ದಾರೆ. ಮೇರು ಪುರುಷರಾಗಿರುವ ಶಿವಕುಮಾರ ಸ್ವಾಮೀಜಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಕಂಬನಿ ಮಿಡಿದಿದ್ದಾರೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ