ರಾಸಲೀಲೆ ನಡೆಸಿ ಸಿಕ್ಕಿಬಿದ್ದ ಹುಣಸಮಾರನಹಳ್ಳಿ ಮಠದ ಉತ್ತರಾಧಿಕಾರಿ?

ಗುರುವಾರ, 26 ಅಕ್ಟೋಬರ್ 2017 (12:45 IST)
ಬೆಂಗಳೂರು: ಯಲಹಂಕದಲ್ಲಿರುವ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ನಟಿ ಜತೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಬಹಿರಂಗವಾಗಿದೆ.

ಮಠದ ಹಾಲಿ ಪೀಠಾಧಿಪತಿಯಾಗಿರುವ ಶಿವಾಚಾರ್ಯ ಸ್ವಾಮೀಜಿ ಪುತ್ರ ದಯಾನಂದ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋಗಳು ಇಂದು ಮಾಧ್ಯಮಗಳಲ್ಲಿ ಬಿತ್ತರವಾಗಿವೆ. ಮಠದ ಕೋಣೆಯಲ್ಲೇ ರಾಸಲೀಲೆ ನಡೆಸಿದ್ದಾನೆ ಎಂದು ಹೇಳಲಾಗ್ತಿದೆ.

ವೀರಶೈವ ಪರಂಪರೆಯ ಮಠಕ್ಕೆ  ಶಿವಾಚಾರ್ಯ ಸ್ವಾಮೀಜಿ 2011ರಲ್ಲಿ ಉತ್ತರಾಧಿಕಾರಿಯನ್ನಾಗಿ ತನ್ನ ಪುತ್ರ ದಯಾನಂದನ್ನೇ ನೇಮಕಮಾಡಿಕೊಂಡಿದ್ದರು. ಕೋಟ್ಯಂತರ ರೂಪಾಯಿ ಆಸ್ತಿಯ ಮೇಲೆ ಕಣ್ಣಿಟ್ಟು ಮಗನಿಗೆ ಪಟ್ಟ ಕಟ್ಟಿದ್ದರು ಎಂದು ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.

ಇದೀಗ ದಯಾನಂದನ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿ ಹೋರಾಟಕ್ಕಿಳಿದಿದ್ದು, ಕೂಡಲೇ ಮಠ ಬಿಟ್ಟು ತೆರಳಿ ಬೇರೆ ಸಭ್ಯ ಉತ್ತರಾಧಿಕಾರಿಯನ್ನು ನೇಮಿಸಬೇಕು. ಶ್ರೀಶೈಲ ಶಾಖಾ ಪೀಠದ ಶ್ರೀಗಳು ಮಠಕ್ಕೆ ಆಗಮಿಸಿ ಮಾತುಕತೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ