ಅಯ್ಯಪ್ಪಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ - ನಿಯಮ ಸಿಡಿಲಿಸಿದ ಕೇರಳ ಸರ್ಕಾರ

ಭಾನುವಾರ, 12 ಡಿಸೆಂಬರ್ 2021 (18:46 IST)
ಕೊರೋನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಶಬರಿಮಲೆ ಯಾತ್ರೆಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಿಲಿಸಲು ಕೇರಳ ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ಸಿಎಂ ಪಿಣರಾಯಿ ವಿಜಯನ್ ಹಾಗೂ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ವೇಳೆ ಪಂಪಾದಿಂದ ನೀಲಿಮಲೆ, ಅಪಾಚೆ ಮೇಡು ಹಾಗೂ ಮರಕೂಟಂ ಮೂಲಕ ಭಕ್ತರು ಶಬರಿಮಲೆ ತಲುಪಲು ಅನುಮತಿ ನೀಡಬೇಕು.
ಮಾರ್ಗ ಮಧ್ಯದಲ್ಲಿ ಭಕ್ತರಿಗೆ ವ್ಯವಸ್ಥೆ, ಪ್ರಾರ್ಥಮಿಕ ಆರೋಗ್ಯ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಶಬರಿಮಲೆ ಯಾತ್ರೆಯ ವೇಳೆ ಪಂಪಾ ನದಿಯಲ್ಲಿ ಸ್ನಾನ ತರ್ಪಣ ನೀಡಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ