ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಂರಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಖ್ಗೆ ವಿರೋಧ ವ್ಯಕ್ತಪಡಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ. ಆದರೆ, ಇದಕ್ಕೆ ನಾವು ತೀವ್ರ ವಿರೋಧ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದರು.
ನನಗೀಗ 84 ವರ್ಷ. ಆದರೆ, ನನ್ನ 55 ವರ್ಷಗಳ ರಾಜಕೀಯ ಜೀವನದಲ್ಲಿ ಪ್ರಾದೇಶಿಕ ಪಕ್ಷ ಅತೀ ಮುಖ್ಯ ಎಂದು ಗ್ರಹಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ನಾಯಕತ್ವವನ್ನು ಉಳಿಸಿ, ಬೆಳೆಸುವ ಕೆಲಸ ಆಗಬೇಕಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟರು.