ಸಿಎಂಗೆ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಮಿಂಚಿದ ಬದ್ಧ ವೈರಿಗಳು

ಸೋಮವಾರ, 4 ನವೆಂಬರ್ 2019 (11:16 IST)
ಚಿಕ್ಕಬಳ್ಳಾಪುರ : ಹೊಸಕೋಟೆಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ ಅವರಿಗೆ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಹೊಸಕೋಟೆ ಕ್ಷೇತ್ರದ ಬದ್ಧ ವೈರಿಗಳ ಫೋಟೊ ರಾರಾಜಿಸುತ್ತಿದೆ.




ಹೌದು. ಇಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರವಾದ ಹೊಸಕೋಟೆಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.


ಈ ಹಿನ್ನಲೆಯಲ್ಲಿ  ಸಿಎಂ ಯಡಿಯೂರಪ್ಪ ಅವರಿಗೆ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಹೊಸಕೋಟೆ ಕ್ಷೇತ್ರದ ಬದ್ಧ ವೈರಿಗಳಾದ ಎಂಟಿಬಿ ನಾಗರಾಜ್ ಹಾಗೂ ಶರತ್ ಬಚ್ಚೇಗೌಡರ ಫೋಟೋ ರಾರಾಜಿಸುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ