ಇಂದು ಕೇಂದ್ರ ಪ್ರಾಚ್ಯವಸ್ತು ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಬಹಳ ಹಳೆಯ ದೇವಸ್ಥಾನವಲ್ಲ. 18 ರಿಂದ 19ನೆಯ ಶತಮಾನದಲ್ಲಿ ನಿರ್ಮಾಣವಾಗಿದ್ದಾಗಿರಬಹುದು. ಚಾಲುಕ್ಯರ, ರಾಷ್ಟ್ರಕೂಟರ ವಾಸ್ತುಶಿಲ್ಪಕ್ಕೆ ಹೋಲಿಕೆ ಇಲ್ಲ. ಪ್ರವಾಹದಿಂದಾಗಿ ಮುಚ್ಚಿ ಹೋಗಿರುವ ಸಾಧ್ಯತೆ ಇದೆ. ಜಿಲ್ಲಾಡಳಿತದ ಜತೆ ಚರ್ಚಿಸಿ ಉತ್ಖನನ ಕಾರ್ಯ ಮಾಡುತ್ತೇವೆ ಎಂದು ಕೇಂದ್ರ ಪ್ರಾಚ್ಯವಸ್ತು ಸರ್ವೇಕ್ಷಣಾ ಇಲಾಖೆಯ ಸಹಾಯಕ ಅಧಿಕಾರಿ ಕಿಶೋರ್ ರಘುಬನ್ ತಿಳಿಸಿದ್ದಾರೆ.