ಮೋದಿ ಪ್ರಧಾನಿಯಾಗಿದ್ರಿಂದ ಪ್ರಶಸ್ತಿ ಬಂತು, ಇಲ್ಲದಿದ್ದರೆ ಬರುತ್ತಿರಲಿಲ್ಲ : ಎಸ್.ಎಲ್ ಭೈರಪ್ಪ

ಗುರುವಾರ, 26 ಜನವರಿ 2023 (14:54 IST)
ಮೈಸೂರು : ನರೇಂದ್ರ ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದರು.

ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ್ ಅವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 

ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ ಇತ್ತು.
ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ