ಶಿರಾ ಚುನಾವಣೆಯ ಹಿನ್ನಲೆ; ಅಖಾಡಕ್ಕೀಳಿದ ದೇವೇಗೌಡರ ಮೊಮ್ಮಕ್ಕಳು

ಶನಿವಾರ, 24 ಅಕ್ಟೋಬರ್ 2020 (11:42 IST)
ಶಿರಾ : ಶಿರಾ ಚುನಾವಣೆಯ ಹಿನ್ನಲೆಯಲ್ಲಿ ಶಿರಾ ಅಖಾಡಕ್ಕೆ ಇದೀಗ ದೇವೇಗೌಡರ ಮೊಮ್ಮಕ್ಕಳು ಇಳಿದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇಂದಿನಿಂದ ಶಿರಾದಲ್ಲಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಶಿರಾದಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಪ್ರಚಾರ ಮಾಡಿದ್ದಾರೆ. ಇದೀಗ ದೇವೇಗೌಡರ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಈ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಸ್ಥಾಪಿಸಲು ಜೆಡಿಎಸ್ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ