ಶ್ರೀಗಳ ಗುರುವಂದನಾ ಕಾರ್ಯಕ್ರಮದ ಹಿನ್ನಲೆ; ಇಂದು ಉಡುಪಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ

ಗುರುವಾರ, 27 ಡಿಸೆಂಬರ್ 2018 (11:56 IST)
ಉಡುಪಿ : ಪೇಜಾವರ ಶ್ರೀಗಳ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು  ಉಡುಪಿಗೆ ಭೇಟಿ ನೀಡಲಿದ್ದಾರೆ.


ಇಂದು ಪೇಜಾವರ ಶ್ರೀಗಳಿಗೆ ಸನ್ಯಾಸತ್ವ ಸ್ವೀಕರಿಸಿ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಹಿನ್ನಲೆಯಲ್ಲಿ  ಪೇಜಾವರ ಶ್ರೀಗಳನ್ನು ಭೇಟಿಯಾಗಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಡುಪಿಗೆ ಬರಲಿದ್ದಾರೆ.


ಬೆಳಿಗ್ಗೆ 11.35ಕ್ಕೆ ಹೆಲಿಕಾಪ್ಟರ್ ಮೂಲಕ ಆದಿ ಉಡುಪಿಗೆ ಆಗಮಿಸಲಿದ್ದು, 12.10 ಕ್ಕೆ ಪೇಜಾವರ ಮಠ ತಲುಪಲಿದ್ದಾರೆ. ಸಚಿವೆ ಉಮಾಭಾರತಿಯಿಂದ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ಜರುಗಲಿದ್ದು, ಇದರಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.


ಈ ಹಿನ್ನಲೆಯಲ್ಲಿ ಉಡುಪಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ