ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ

ಗುರುವಾರ, 13 ಸೆಪ್ಟಂಬರ್ 2018 (18:10 IST)
ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ ವಿಧಿಸಿ  ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟದ ಗಂಜಾಂನಲ್ಲಿರುವ ಪ್ರವಾಸಿತಾಣ ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಂಗಪಟ್ಟಣದ  ತಹಶೀಲ್ದಾರ್ ನಾಗೇಶ್ ಈ ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನೆ ವೇಳೆ ಕಾವೇರಿ ಸಂಗಮದಲ್ಲಿ ಅವಘಡ ಸಂಭವಿಸುವ ಹಿನ್ನಲೆಯಲ್ಲಿ ‌ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.  ತಾಲೂಕು ಆಡಳಿತವು ಸೆ.13 ರಿಂದ ಸೆ.23 ರವರೆಗೆ 10 ದಿನಗಳ ಕಾಲ ಕಾವೇರಿ ಸಂಗಮದಲ್ಲಿ ಗಣಪತಿ ವಿಸರ್ಜನೆ ಮಾಡಲು ನಿರ್ಬಂಧ‌ ಹೇರಿದೆ.

ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ತಪ್ಪಿತಸ್ಥರ ವಿರುದ್ಧ  ಕಾನೂನು ಕ್ರಮದ ಕೈಗೊಳ್ಳದಾಗಿಯೂ ಎಚ್ಚರಿಕೆ ನೀಡಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ