ಬಿಜೆಪಿ ಸರಕಾರ ಬೀಳೋದು ಪಕ್ಕಾ – ಭವಿಷ್ಯ ನುಡಿದ ಮಾಜಿ ಸಿಎಂ

ಬುಧವಾರ, 27 ನವೆಂಬರ್ 2019 (19:35 IST)
ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಕೆಳಗಿಳಿಯೋದು ಪಕ್ಕಾ ಆಗಿದೆ. ಹೀಗಂತ ಮಾಜಿ ಸಿಎಂ ಭವಿಷ್ಯ ನುಡಿದಿದ್ದಾರೆ.

ರಾಜ್ಯದ 15 ಕ್ಷೇತ್ರಗಳ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ 12 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ. ಹೀಗಾಗಿ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಸರಕಾರ ಪತನಗೊಳ್ಳಲಿದೆ ಅಂತ ಮಾಜಿ ಸಿಎಂ ಹಾಗೂ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದ್ರು.

ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ದೂರಿದ ಸಿದ್ದರಾಮಯ್ಯ, ಈ ವಿಷಯದಲ್ಲಿ ಬಿಜೆಪಿ ಜೊತೆಗೆ ಸ್ಪರ್ಧೆ ಅಸಾಧ್ಯ ಅಂತ ತಿರುಗೇಟು ನೀಡಿದ್ದಾರೆ.

ಅನರ್ಹ ಶಾಸಕರಿಗೆ ಸಚಿವ ಸ್ಥಾನ ಕೊಡೋದಾಗಿ ಯಡಿಯೂರಪ್ಪ ಹೇಳ್ತಿದ್ದಾರೆ. ಲಿಂಗಾಯತರು ಕೈಬಿಡದಂತೆ ಕೇಳ್ತಿರೋದು ನೀತಿ ಸಂಹಿತೆ ಉಲ್ಲಂಘನೆ ಆಗ್ತಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ