ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ...

ಗುರುವಾರ, 1 ಫೆಬ್ರವರಿ 2018 (20:54 IST)

ಸಂತೋಷ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾಗಿರುವ ಸಂತೋಷ ಹಾಗೂ ಆರೋಪಿಗಳು ಐದು ವರ್ಷಗಳಿಂದ ಸ್ನೇಹಿತರು. ವ್ಯವಹಾರಿಕ ಕಾರಣಕ್ಕೆ ಕೊಲೆ ನಡೆದಿದೆ. ಸಂತೋಷ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಹಾಗೂ ಉದ್ಯೋಗ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ 66 ಕೊಲೆಗಳು ನಡೆದಿವೆ. ಬಿಜೆಪಿ ಅವಧಿಯಲ್ಲಿ 96 ಕೊಲೆ ನಡೆದಿವೆ ಎಂದ ಅವರು ಸಂತೋಷ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದ್ದು, ತನಿಖೆಯಿಂದ ಸತ್ಯ ಹೊರಗೆ ಬರಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ