ಸಕ್ಕರೆ ನಾಡಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ, ಎಸ್.ಎಂ.ಕೃಷ್ಣ ಭಾಗಿಯಾಗುವ ಕುತೂಹಲ

ಶುಕ್ರವಾರ, 19 ಜನವರಿ 2018 (10:33 IST)

ಬಿಜೆಪಿ ಪರಿವರ್ತನಾ ಯಾತ್ರೆಯು ಮಂಡ್ಯ ಜಿಲ್ಲೆಗೆ ಎಂಟ್ರಿ ಪಡೆದಿದ್ದು, ಇಂದಿನಿಂದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಮೊದಲ ಬಾರಿಗೆ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಮದ್ದೂರು, ಮಂಡ್ಯ, ನಾಗಮಂಗಲ, ಕೆಆರ್ ಪೇಟೆಯಲ್ಲಿ ಯಾತ್ರೆ ನಡೆಯಲಿದ್ದು, ಮದ್ದೂರಿನಲ್ಲಿ ಆರಂಭವಾಗುವ ಯಾತ್ರೆಯಲ್ಲಿ ಎಸ್.ಎಂ.ಕೃಷ್ಣ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದಾರೆ.

ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯವರಾದ ಎಸ್.ಎಂ.ಕೃಷ್ಣ ಅವರು ಹೊಂದಿರುವ ಪ್ರಭಾವವನ್ನು ಬಳಸಿಕೊಂಡು ಖಾತೆ ತೆರೆಯಲು ಬಿಜೆಪಿ ಹವಣಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ