ಕಂಬಕ್ಕೆ ಕಟ್ಟಿ ಕ್ಯಾಬ್​​​ ಚಾಲಕನಿಗೆ ಥಳಿತ

ಶನಿವಾರ, 26 ನವೆಂಬರ್ 2022 (15:45 IST)
ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಸಿಸುತ್ತಿದ್ದ ಕ್ಯಾಬ್ ಚಾಲಕನಿಗೆ ಗ್ರಾಮಸ್ಥರು ಥಳಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಕ್ಕರಾಯಪಟ್ಟಣ ಸಮೀಪ ಸಿದ್ದರಹಳ್ಳಿಯಲ್ಲಿ ನಡೆದಿದೆ. ಚಾಲಕ ರಾಜಪ್ಪ ಕ್ಯಾಬ್​ನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ್ತಿದ್ದನು. ಬೆಳಗ್ಗೆಯಿಂದ ಸಂಜೆಯವರೆಗೂ ಈತ ಶಿಕ್ಷಕಿಗಾಗಿ ಶಾಲೆ ಬಳಿಯೇ ಕಾರುತ್ತಾ ಇರುತ್ತಿದ್ದ. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿನಿಯರ ಜೊತೆ ರಾಜಪ್ಪ ಅಸಭ್ಯವಾಗಿ ವರ್ತಿಸಿದ್ದು, ಈ ಸಂಬಂಧ ಸಖರಾಯಪಟ್ಣಣ ಪೊಲೀಸ್ ಠಾಣೆಯಲ್ಲಿ ರಾಜಪ್ಪ ವಿರುದ್ಧ ಪೋಕ್ಸೊ ಕೇಸ್​ ದಾಖಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ