ಗೋಹತ್ಯೆ ನಿಷೇಧ ಕಾಯ್ದೆ: ಬಿಜೆಪಿಯಿಂದ ರಾಜಕೀಯ ಲಾಭಕ್ಕಾಗಿ ಹುನ್ನಾರ

ಸೋಮವಾರ, 29 ಮೇ 2017 (13:02 IST)
ಬಿಜೆಪಿ ರಾಜಕೀಯ ಲಾಭಕ್ಕಾಗಿ ನೂತನ ಗೋನಿರ್ವಹಣೆ ಕಾಯ್ದೆ ಜಾರಿಗೆ ತಂದಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ ಆರೋಪಿಸಿದ್ದಾರೆ. 
 
ಇದೊಂದು ಬಲವಂತದ ಮತಾಂತರವಾಗಿದ್ದು, ಒಂದು ವೇಳೆ, ಇಂತಹ ಕಾನೂನು ಜಾರಿಗೆ ತರುವುದೇ ಆಗಿದ್ದಲ್ಲಿ ಎಲ್ಲರ ಸಲಹೆ ಪಡೆಯಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.
  
ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ. ಸಚಿವನಾಗಿ ಉತ್ತಮ ಜನಪರ ಕಾರ್ಯನಿರ್ವಹಿಸಬೇಕು ಎನ್ನುವುದೇ ನನ್ನ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಇಂದು ನೂತನ ಕೆಪಿಸಿಸಿ ಅಧ್ಯಕ್ಷರನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಸಚಿವ ಎಚ್.ಸಿ.ಮಹಾದೇವಪ್ಪ ಮಾಹಿತಿ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ