ಕೊರೊನಾ ಭೀತಿಗೆ ಸ್ಮಶಾನ ಸೀಲ್ ಡೌನ್

ಮಂಗಳವಾರ, 14 ಜುಲೈ 2020 (21:01 IST)
ಹೆಚ್ಚುತ್ತಿರುವ ಕೊರೊನಾ ಭೀತಿಯಿಂದ ಸ್ಮಶಾನವನ್ನೇ ಸೀಲ್ ಡೌನ್ ಮಾಡಲಾಗಿದೆ.

ವಿಜಯಪುರದಲ್ಲಿ ಈ ಘಟನೆ ನಡೆದಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರ ಮಾಡಬಾರದೆಂದು ಜನರೇ ಸ್ಮಶಾನಕ್ಕೆ ಮುಳ್ಳಿನ ಗಿಡ ಹಾಕಿ ಸೀಲ್ ಡೌನ್ ಮಾಡಿದ್ದಾರೆ.

ಚಾಲಕ್ಯ ನಗರದ ರುದ್ರಭೂಮಿಯಲ್ಲಿ ಕೊರೊನಾಕ್ಕೆ ಬಲಿಯಾದವರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಇದರಿಂದ ಸುತ್ತಲಿನ ಜನರು ಸ್ಮಶಾನಕ್ಕೆ ಹೋಗುವ ಮಾರ್ಗವನ್ನೇ ಬಂದ್ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ