ರಾಜ್ಯದ ಪ್ರವಾಹ ಪರಿಹಾರದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ-ಸಿಎಂ ಬಿಎಸ್ ವೈ ಸ್ಪಷ್ಟನೆ

ಶುಕ್ರವಾರ, 4 ಅಕ್ಟೋಬರ್ 2019 (11:32 IST)
ಬೆಳಗಾವಿ : ರಾಜ್ಯದ ಪ್ರವಾಹ ಪರಿಹಾರದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.




ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಸ್ತಾಪ ಮತ್ತು ಕೇಂದ್ರ ತಂಡದ ವರದಿ ತಾಳೆಯಾಗ್ತಿಲ್ಲ. ಈ ಕಾರಣಕ್ಕೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕಾಗಿ ನಮ್ಮ ಇಬ್ಬರು  ಅಧಿಕಾರಿಗಳನ್ನ ದೆಹಲಿಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.


ಈಗಾಗಲೇ ಕೇಂದ್ರದ ಎಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಮೂರ್ನಾಲ್ಕು ದಿನದಲ್ಲಿ ಪರಿಹಾರದ ಹಣ ಬಿಡಗಡೆಯಾಗಲಿದೆ. ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ. ಖಾಲಿಯಾಗಿದ್ದರೆ ಪರಿಹಾರ ನೀಡಲು ಆಗುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ