ಸುರ್ಜೇವಾಲಾ ಅವರು ಇದ್ದ ಸಭೆ ಅಧಿಕೃತ ಅಲ್ಲ ಎಂದು ಸಿಎಂ ಸ್ಪಷ್ಟನೆ

ಬುಧವಾರ, 14 ಜೂನ್ 2023 (13:38 IST)
ಸುರ್ಜೇವಾಲಾ ಅಧಿಕೃತ ಸಭೆ ನಡೆಸಿಲ್ಲ.ಶಾಸಕರ ಜತೆ ಚರ್ಚೆ ಮಾಡಿದಾರೆ.ಡಿಸಿಎಂ ಪಾಲ್ಗೊಂಡಿದ್ದ ಸಭೆ ಅದು.ಚುನಾವಣೆ ಬಗ್ಗೆ ಚರ್ಚೆ ಮಾಡಲು ಕರೆದ ಸಭೆ ಅದು,ಕುಮಾರಸ್ವಾಮಿ ಸುಮ್ನೆ ಆರೋಪ ಮಾಡ್ತಾರೆ.ಸುರ್ಜೇವಾಲಾ ಅವರು ಅಧಿಕಾರಿಗಳ ಸಭೆ ಕರೆಯೋಕ್ಕಾಗುತ್ತಾ.?ಬಿಜೆಪಿಯವ್ರು ರಾಜ್ಯಪಾಲರಿಗೆ ದೂರು ಕೊಡಲಿ ಬೇಕಾದರೆ ಎಂದು ಸಿದ್ದರಾಮಯ್ಯ ಸಿದ್ದರಾಮಯ್ಯ ಹೇಳಿದ್ದಾರೆ.
 
ಅಲ್ಲದೇ ಪ್ರತಾಪ್ ಸಿಂಹ ವಿರುದ್ಧ ಸಿಎಂ ಆಕ್ರೋಶ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ಯಾರು ಹೊಂದಾಣಿಕೆ ರಾಜಕೀಯ ಮಾಡ್ತಿರೋರು ಅಂತ ಪ್ರತಾಪ್ ಸಿಂಹ ಹೇಳಲಿ,ಯಾರು ಅವರು ಹೊಂದಾಣಿಕೆ ರಾಜಕೀಯ ಮಾಡ್ತಿರೋರು..?ತನಿಖೆ ಮಾಡಿಸಿ ಅಂತ ಈ ಪ್ರತಾಪ್ ಸಿಂಹ ಹೇಳಿದ್ನಾ?ಪ್ರತಾಪ್ ಸಿಂಹ ಎಳಸು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ