ಗ್ರಾಮ ವಾಸ್ತವ್ಯಕ್ಕೆ ತೆರಳಲು ರೈಲಿನಲ್ಲಿ ಪ್ರಯಾಣ ಬೆಳೆಸಲು ಸಿಎಂ ನಿರ್ಧಾರ

ಬುಧವಾರ, 12 ಜೂನ್ 2019 (11:54 IST)
ಬೆಂಗಳೂರು : ಗ್ರಾಮಗಳಲ್ಲಿನ ಜನರ  ಕಷ್ಟ ಆಲಿಸಲು ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡುವ ನಿರ್ಧಾರ ಮಾಡಿದ್ದು, ಅದಕ್ಕಾಗಿ  ಸಿಎಂ ರೈಲಿನಲ್ಲಿ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.



 


ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊದಲಬಾರಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಆದಕಾರಣ ಗ್ರಾಮಕ್ಕೆ ತೆರಳಲು ರೈಲು ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

 

ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ ಬೆಳೆಸಲಿದ್ದು, ಆ ಮೂಲಕ ಅವರು  ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ