ಅಕ್ಟೋಬರ್ 7ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ

ಸೋಮವಾರ, 3 ಅಕ್ಟೋಬರ್ 2022 (21:16 IST)
ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, SC,ST ಮೀಸಲಾತಿ ಹೆಚ್ಚಳ ವಿಚಾರವಾಗಿ ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 7ಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅಕ್ಟೋಬರ್ 7ರ ಬೆಳಗ್ಗೆ 11.30ಕ್ಕೆ ಸರ್ವಪಕ್ಷ ಸಭೆ ನಿಗದಿಯಾಗಿದೆ. ವಿಧಾನಮಂಡಲದ ಉಭಯ ಸದನಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಮೀಸಲಾತಿಗೆ ಸಂಬಂಧಿಸಿದಂತೆ ರಚಿಸಿದ್ದ ನ್ಯಾ. ನಾಗಮೋಹನ್ ದಾಸ್ ಸಮಿತಿಯು ನೀಡಿರುವ ವರದಿ ಕುರಿತು ಚರ್ಚೆ ನಡೆಸಲಾಗುತ್ತದೆ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಸಲ್ಲಿಸಿದ್ದು, ಅದರನ್ವಯ SCಗೆ ಶೇ.15-17 ಮತ್ತು STಗೆ ಶೇ. 7ರಷ್ಟು ಮೀಸಲಾತಿ ಪರಿಗಣಿಸಬೇಕು ಎಂದು ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ