ಕೈ ನಾಯಕರ ಬಗ್ಗೆ ಅಸಮಧಾನ ಇಲ್ಲ ಎಂದ ಸಿಎಂ

ಶುಕ್ರವಾರ, 28 ಡಿಸೆಂಬರ್ 2018 (19:13 IST)
ಮೈತ್ರಿ ಸರಕಾದ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಕೈ ಪಕ್ಷದ ನಾಯಕರ ಬಗ್ಗೆ  ಅಸಮಾಧಾನ ಎನ್ನೋದು ಇಲ್ಲ ಎಂದು ಸಿಎಂ ಹೇಳಿದ್ದಾರೆ.

11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ ನಂತರ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ನೋಡಿದರೆ ಅಸಮಾಧಾನಗೊಂಡವನಂತೆ ಕಾಣುತ್ತೇನೆಯೇ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರ ಜತೆ ಯಾವುದೇ ಅಸಮಾಧಾನ, ಮುನಿಸಾಗಲಿ ಇಲ್ಲ. ಎಲ್ಲವನ್ನು ಚರ್ಚೆ ಮಾಡಿಯೇ ತೀರ್ಮಾನ ಮಾಡಿದ್ದೇವೆ. ಅದರಂತೆ ಸಂಪುಟ ವಿಸ್ತರಣೆಯಾಗಿದೆ. ನಿಗಮ ಮಂಡಳಿಗಳ ನೇಮಕದ ಬಗ್ಗೆಯೂ ಸದ್ಯದಲ್ಲೇ ಆದೇಶಗಳು ಹೊರಬೀಳಲಿವೆ ಎಂದರು.

ರಾಜ್ಯ ಕಾಂಗ್ರೆಸ್ ನಾಯಕರು ಕೆಲ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರಾಗಿ ಮತ್ತು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ತಳ್ಳಿ ಹಾಕಿದ ಅವರು, ಯಾವುದೇ ಅಸಮಾಧಾನಗಳಿಲ್ಲ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ