ನಾಳೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲಿರುವ ಸಿಎಂ

ಶುಕ್ರವಾರ, 1 ಸೆಪ್ಟಂಬರ್ 2023 (20:04 IST)
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ‌ (Krishna river) ನಿರ್ಮಿಸಲಾದ ಡ್ಯಾಂನಲ್ಲಿ ಕೃಷ್ಣಾ‌‌ ಭಾಗ್ಯ ಜಾಲ ‌ನಿಯಮಿತದಿಂದ ಗಂಗಾ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಾಳೆ ಕೃಷ್ಣಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಬಳ್ಳಾರಿ‌ಯ ಜಿಂದಾಲ್​ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, 11 ಗಂಟೆಗೆ ಜಿಂದಾಲ್​ನಿಂದ‌‌ ವಿಶೇಷ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಲಿದ್ದಾರೆ. ಆಲಮಟ್ಟಿಯ‌ ಡ್ಯಾಂ ಆವರಣದಲ್ಲಿ ಮೊದಲು ಕೃಷ್ಣೆಗೆ‌ ಗಂಗಾಪೂಜೆ ನೆರವೇರಿಸಿ ಬಳಿಕ ಬಾಗಿನ‌ ಅರ್ಪಿಸಲಿದ್ದಾರೆ. ಜಿಲ್ಲಾ‌ ಉಸ್ತುವಾರಿ ಸಚಿವ ಎಂ‌ಬಿ‌ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು ಮುಖಂಡರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕೆಬಿಜೆಎನ್ಎಲ್​ಎಂಡಿ ಕಚೇರಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಕುರಿತ ಭೂಸ್ವಾಧೀನ, ಪುನರ್ ವಸತಿ, ಪುನರ್ ನಿರ್ಮಾಣ ಕುರಿತು ಅಧಿಕಾರಿಗಳೊಂದಿಗೆ ಸಭೆ ಮಾಡಲಿದ್ದಾರೆ. ಬಳಿಕ‌ ರೈತರ ಅಹವಾಲು ಸ್ವೀಕಾರ ಮಾಡಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ