ಸಮ್ಮಿಶ್ರ ಸರಕಾರ ರೈತ ಪರವಾಗಿದೆ ಎಂದ ಸಿಎಂ

ಶುಕ್ರವಾರ, 16 ನವೆಂಬರ್ 2018 (19:34 IST)
ರೈತರ ವಿಚಾರದಲ್ಲಿ ಪ್ರತಿಷ್ಠೆಯ ಪ್ರಶ್ನೆಯೇ ಇಲ್ಲ. ರೈತರ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಸಿದ್ದರಿದ್ದೇವೆ. ಹಾಗಾಗಿ ಕಬ್ಬು ಬೆಳೆಗಾರರು ತಮ್ಮ ಪ್ರತಿಭಟನೆಯನ್ನು ವಾಪಸ್ ಪಡೆಯಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸದಿದ್ದರೆ ಬೆಳಗಾವಿ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಹೇಳುವವರು ರೈತ ವಿರೋಧಿಗಳು. ಇದು ರೈತ ವಿರೋಧಿ ಹೇಳಿಕೆಯಾಗಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ವಿಧಾನಸೌಧದ ಬಾಗಿಲು ಮುಕ್ತವಾಗಿದೆ. ನಾನೇನು ದಿಗ್ಬಂಧನ ಹಾಕಿಲ್ಲ. ರೈತರು ಬಂದು ತಮ್ಮ ಸಮಸ್ಯೆಗಳನ್ನು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬಹುದು. ಅದು ಬಿಟ್ಟು ಪ್ರತಿಭಟನೆ ಮಾಡುವುದು ಸರಿಯಾದುದಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ನಡೆದಿರುವ ರೈತರ ಪ್ರತಿಭಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಸೋಮವಾರ ವಿಧಾನಸೌಧಕ್ಕೆ ರೈತರನ್ನು ಕರೆಸಿ ಚರ್ಚೆ ಮಾಡುತ್ತೇನೆ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ