ಬಿಜೆಪಿ ಯಾವ ಯಾತ್ರೆ ಮಾಡಿದ್ರೂ ಕಾಂಗ್ರೆಸ್‍ಗೆ ಜಯ ಖಚಿತ: ಕೆ.ಸಿ.ವೇಣುಗೋಪಾಲ್

ಸೋಮವಾರ, 6 ನವೆಂಬರ್ 2017 (19:22 IST)
ಬಿಜೆಪಿ ಯಾವ ಯಾತ್ರೆ ಮಾಡಿದ್ರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಜಯ ಖಚಿತ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜಕೀಯ ಲಾಭಕ್ಕಾಗಿ ಅಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕಾಂಗ್ರೆಸ್ ಮುಖಂಡರ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ. ಇದೊಂದು ಗಂಭೀರವಾದ ವಿಷಯವಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಕೆಟ್ಟ ನಡುವಳಿಕೆಗೆ ಉತ್ತರ ಹೇಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
 
 ಕೇಂದ್ರದ ಯಾವುದೇ ತನಿಖೆ ಸಂಸ್ಥೆ ಸ್ವತಂತ್ರವಾಗಿ ಉಳಿದಿಲ್ಲ. ಪ್ರಧಾನಿ ಮೋದಿ ನೇತೃತ್ವದ ಸರಕಾರ ಪ್ರತಿಯೊಂದು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಹಲವಾರು ಇಲಾಖೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ