ವಿಧಾನಪರಿಷತ್ ಸಭಾಪತಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ , ಕಾಂಗ್ರೆಸ್ ಜೆಡಿಎಸ್ ಹೆಸರನ್ನು ಬಳಸಿಕೊಳ್ಳುತ್ತಿವೆ. ಸಭಾಪತಿ ಚುನಾವಣೆಯಲ್ಲಿ ರಾಜ್ಯಸಭೆ ಚುನಾವಣೆಯ ಕಹಿ ಅನುಭವ ಮರೆಯೋಣ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್, ಬಿಜೆಪಿ ಅಂಕಿಸಂಖ್ಯೆಗಳ ಕಸರತ್ತು ಬಿಡಬೇಕು. ಏಳು ಬಾರಿ ಆಯ್ಕೆಯಾಗಿರುವ ಬಸವರಾಜ್ ಹೊರಟ್ಟಿಯವರನ್ನು ಸಭಾಪತಿ ಸ್ಥಾನಕ್ಕೆ ಒಮ್ಮತದಿಂದ ಆಯ್ಕೆ ಮಾಡೋಣ ಎಂದು ಬಿಜೆಪಿ , ಕಾಂಗ್ರೆಸ್ ಪಕ್ಷದ ನಾಯಕರುಗಳಿಗೆ ಜೆಡಿಎಸ್ ಮುಖಂಡ ವೈ.ಎಸ್.ದತ್ತಾ ಕರೆ ನೀಡಿದ್ದಾರೆ.